ಅಭಿಪ್ರಾಯ / ಸಲಹೆಗಳು

Crime Reported in CEN Crime PS

ದಿನಾಂಕ 04-02-2022 ರಂದು ಠಾಣಾ ಹೆಚ್.ಸಿ. ಸಂತೋಷ, ಪಿ.ಸಿ ರಾಜಪ್ಪ ರವರ ಜೊತೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ 10-30 ಗಂಟೆಗೆ ಬಾತ್ಮೀದಾರರು ಕರೆ ಮಾಡಿ ಮಂಗಳೂರು ನಗರದ ಕೆ.ಎಸ್ ಆರ್ ಟಿ.ಸಿ ಬಸ್ ಸ್ಟ್ಯಾಂಡ ಬಳಿ ಓರ್ವ ಯುವಕ ಯಾವುದೋ ಅಮಲು ವಸ್ತುವನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿರುವುದಾಗಿ ಮಾಹಿತಿ ನೀಡಿದ್ದು ಸ್ಥಳಕ್ಕೆ 10-45 ಗಂಟೆಗೆ ದಾಳಿ ನಡೆಸಿ ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಸಾಗರ್ ಬಂಗೇರಾ ಪ್ರಾಯ 21ವರ್ಷ ಎಂಬಾತನನ್ನು ವಶಕ್ಕೆ ಪಡೆದು ಮಂಗಳೂರು ನಗರದ ಕುಂಟಿಕಾನದಲ್ಲಿರುವ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಲ್ಲಿ ಆಪಾದಿತನು ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಾಧಿಕಾರಿಯವರು ನೀಡಿದ ವೈದ್ಯಕೀಯ ಧೃಢಪತ್ರದ ಮೇರೆಗೆ ಕ್ರಮ ಕೈಗೊಂಡಿರುವುದಾಗಿದೆ ಎಂಬಿತ್ಯಾದಿ.

 

2) ದಿನಾಂಕ 04-02-2022 ರಂದು ಹೆಚ್.ಸಿ. ಶೀನಪ್ಪ ರವರು ಪಿ.ಸಿ ಮಂಜುನಾಥ ರವರ ಜೊತೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ  ಗಂಟೆಗೆ ಬಾತ್ಮೀದಾರರು ಕರೆ ಮಾಡಿ ಮಂಗಳೂರು ನಗರದ ಚಿಲಿಂಬಿ ಬಳಿ ಓರ್ವ ಯುವಕ ಯಾವುದೋ ಅಮಲು ವಸ್ತುವನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿರುವುದಾಗಿ ಮಾಹಿತಿ ನೀಡಿದ್ದು ತಕ್ಷೀರು ಸ್ಥಳಕ್ಕೆ 11-15 ಗಂಟೆಗೆ ದಾಳಿ ನಡೆಸಿ ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವಸಂತ್ ಪೂಜಾರಿ ಪ್ರಾಯ 22 ವ಼ರ್ಷ ಎಂಬಾತನನ್ನು ವಶಕ್ಕೆ ಪಡೆದು ಮಂಗಳೂರು ನಗರದ ಕುಂಟಿಕಾನದಲ್ಲಿರುವ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಲ್ಲಿ ಆಪಾದಿತನು ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಾಧಿಕಾರಿಯವರು ನೀಡಿದ ವೈದ್ಯಕೀಯ ಧೃಢಪತ್ರದ ಮೇರೆಗೆ ಕ್ರಮ ಕೈಗೊಂಡಿರುವುದಾಗಿದೆ ಎಂಬಿತ್ಯಾದಿ.

 

Crime Reported in Moodabidre PS  

ದಿನಾಂಕ: 04-02-2022 ರಂದು ಪಿರ್ಯಾದಿ ARSALAN ದಾರರು ಮಂಗಳೂರಿಗೆ ವೀಸಾ ಎಂಟ್ರಿ ಮಾಡಿಸಲೆಂದು ಕೆಎ-19 ಡಿ-9119 ನೇ ಪದ್ಮಾಂಭಿಕ ಬಸ್ಸಿನಲ್ಲಿ ಪಿರ್ಯಾದಿದಾರರು ಹಿಂಭಾಗದ ಕೊನೆಯ ಸೀಟಿನ ಬಲಭಾಗದಲ್ಲಿ ಕಿಟಿಕಿ ಬಳಿ ಕುಳಿತು ಪ್ರಯಾಣಿಸುತ್ತಿದ್ದು  ಬಸ್ಸು ತೋಡಾರು ಗ್ರಾಮದ ತೋಡಾರು ದರ್ಗಾದ ಬಳಿ ತಲುಪುತ್ತಿದ್ದಂತೆ ಸುಮಾರು 08:15 ಗಂಟೆ ಸಮಯಕ್ಕೆ ಎದುರಿನಿಂದ ಅಂದರೆ ಕೈಕಂಬ ಕಡೆಯಿಂದ ಕೆಎ-19 ಎಬಿ-5785 ನೇ ಬಸ್ಸಿನ ಚಾಲಕ ರಾಜು ಎಂಬವರು ಬಸ್ಸನ್ನು ಅತೀ ವೇಗ ಹಾಗೂ ಅಜಾಗರುಕತೆಯಿಂದ ಚಾಲಯಿಸಿಕೊಂಡು ಬಂದು ಪಿರ್ಯಾದಿದಾರರು ಪ್ರಯಾಣಿಸುತ್ತಿದ್ದ  ಬಸ್ಸಿನ ಹಿಂಬದಿಗೆ ಡಿಕ್ಕಿ ಪಡಿಸಿದ ಪರಿಣಾಮ ಬಸ್ಸಿನ ಕಿಟಕಿಯ ರಾಡ್ ಪಿರ್ಯಾದಿದಾರರ ಬಲಕೈ ತೋಳಿಗೆ ತಾಗಿ ಮೂಳೆ ಮುರಿತದ ಗಾಯವಾಗಿರುವುದಾಗಿದೆ, ಈ ಅಪಘಾತಕ್ಕೆ ಬಸ್ಸು ನಂಬ್ರ ಕೆಎ-19 ಎಬಿ-5785 ನೇ ಬಸ್ಸಿನ ಚಾಲಕ ರಾಜು ರವರು ಅತೀ ವೇಗ ಹಾಗೂ ಅಜಾಗರುಕತೆಯ ಚಾಲನೆಯೆ ಕಾರಣವಾಗಿರುತ್ತದೆ ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 04-02-2022 08:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080