ಅಭಿಪ್ರಾಯ / ಸಲಹೆಗಳು

Crime Reported in Panambur PS

 ದಿನಾಂಕ 05-04-2022 ರಂದು ಸಂಜೆ 09.45 ಗಂಟೆಗೆ ಪಿ.ಎಸ್.ಐ ಕುಮಾರೇಶನ್  ರವರು ಹೆಚ್.ಸಿ. ಡೇವಿಡ್ ಡಿ ಸೊಜಾರವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಗಸ್ತು ಕರ್ತವ್ಯದಲ್ಲಿ ಇದ್ದ ಸಮಯ 9-45 ಗಂಟೆಗೆ ಮಂಗಳೂರಿನ ತಣ್ಣೀರುಬಾವಿ ಮಸೀದಿ ಬಳಿ  ಯಾವುದೋ ಮಾದಕ ವಸ್ತು ಸೇವನೆ ಮಾಡಿ ಅದರ ನಶೆಯಲ್ಲಿ ಇದ್ದಂತೆ ಕಂಡುಬಂದಿದ್ದ   ಮಹಮ್ಮದ್ ಷರೀಪ್ ಪ್ರಾಯ 48 ವರ್ಷ,  ವಾಸ: ತಣ್ಣೀರುಬಾವಿ ಮಸೀದಿ ಬಳಿ , ತಣ್ಣೀರುಬಾವಿ  ಮಂಗಳೂರು. ಎಂಬವನನ್ನು   ವಶಕ್ಕೆ ಪಡೆದುಕೊಂಡಿದ್ದು ನಂತರ  ಸದ್ರಿಯವನನ್ನು ವೈದ್ಯಕೀಯ ತಪಾಸಣೆಗೆ ಗುರಿಪಡಿಸಿ ಮಾದಕ ವಸ್ತುಗಳನ್ನು/ ದ್ರವ್ಯಗಳನ್ನು ಸೇವನೆ ಮಾಡಿರುವರೇ ಎಂಬುದರ ಬಗ್ಗೆ ವೈದ್ಯಾಧಿಕಾರಿಗಳು, ಎ.ಜೆ.ಆಸ್ಪತ್ರೆ,  ಮಂಗಳೂರುರವರ  ಬಳಿ ಕಳುಹಿಸಿಕೊಟ್ಟಿದ್ದು ವೈದ್ಯಾಧಿಕಾರಿಗಳು ಪರೀಕ್ಷಿಸಿ ಗಾಂಜಾ ಸೇವನೆ ಮಾಡಿರುವುದಾಗಿ  ದೃಡ ಪತ್ರ ನೀಡಿರುವುದರಿಂದ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ತನಿಕೆ ಕೈಗೊಂಡಿರುವುದು   ಎಂಬಿತ್ಯಾದಿಯಾಗಿರುತ್ತದೆ.

 

Crime Reported in Ullal PS

ದಿನಾಂಕ 05-04-2022 ರಂದು ಪಿರ್ಯಾದಿ ಹೆಚ್.ಸಿ Mohammad ರವರು ರವರು ಹೊಯ್ಸಳ ವಾಹನದಲ್ಲಿ  ಹಗಲು ಕರ್ತವ್ಯದಲ್ಲಿದ್ದು, ಬೆಳಿಗ್ಗೆ 11-51 ಗಂಟೆಗೆ ಕೋಟೆಪುರದಲ್ಲಿ ಅಕ್ರಮ ಮರಳುಗಾರಿಕೆ ಬಗ್ಗೆ ಮಾಹಿತಿ ಬಂದಿದ್ದು ಅದರಂತೆ ಪಿರ್ಯಾದಿದಾರರು ಕೋಟೆಪುರ ಬರಾಕಾ ಫ್ಯಾಕ್ಟರಿ ಎದುರಿಗೆ ಬೆಳಿಗ್ಗೆ 11-56 ಗಂಟೆಗೆ ತಲುಪುತ್ತಿದ್ದಂತೆ ಮಾಹಿತಿ ಬಂದ ಟೆಂಪೋ ಬರುತ್ತಿದ್ದು ಟೆಂಪೋವನ್ನು ನಿಲ್ಲಿಸಲು ಸೂಚನೆ ನೀಡಿ ಇಲಾಖಾ ವಾಹನದಿಂದ ಇಳಿದು ಟೆಂಪು ಚಾಲಕನ ಬಳಿ ತೆರಳಿ ಪರಿಶೀಲಿಸಲಾಗಿ ಸಾಮನ್ಯ ಮರಳನ್ನು ಸಾಗಿಸುತ್ತಿದ್ದು ಈ ಬಗ್ಗೆ ಸದ್ರಿ ಚಾಲಕನ ಹೆಸರು ಕೇಳಲಾಗಿ ಸುರೇಶ ಎಂದು ತಿಳಿಸಿದ್ದು, ಟೆಂಪೋದಲ್ಲಿ ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಮರಳನ್ನು ಸಾಗಿಸುತ್ತಿರುವುದರಿಂದ   KA-20-6385 ನೇ ನಂಬ್ರದ ಟೆಂಪೋ ಮತ್ತು ಚಾಲಕನನ್ನು ಪಿರ್ಯಾದಿದಾರರು ಠಾಣೆಗೆ ತಂದು ಹಾಜರುಪಡಿಸಿದ್ದು ಸೂಕ್ತ ಕ್ರಮಕ್ಕಾಗಿ ಕೋರಿದ ಪಿರ್ಯಾದಿ ಎಂಬಿತ್ಯಾದಿ.

Crime Reported in Bajpe PS

ಫಿರ್ಯಾದಿ PSI Smt. Kamala ದಾರರು ದಿನಾಂಕ 05.04.2022 ರಂದು ಬೆಳಿಗ್ಗೆ ಠಾಣಾ ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದರಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ ಸುಮಾರು 10:00 ಗಂಟೆಗೆ ಬಜಪೆ ಠಾಣಾ ವ್ಯಾಪ್ತಿಯ ಮಂಗಳೂರು ತಾಲೂಕು, ಬಜಪೆ ಗ್ರಾಮದ, ಶಾಂತಿಗುಡ್ಡೆ  ಬಸ್ ನಿಲ್ದಾಣದ ಬಳಿ ಒಬ್ಬ ವ್ಯಕ್ತಿಯು ಅಮಲಿನಲ್ಲಿದ್ದಂತೆ ಕಂಡು ಬಂದಿದ್ದು, ಆತನನ್ನು ಸೂಕ್ಷವಾಗಿ ಪರಿಶೀಲಿಸಿದಲ್ಲಿ ಯಾವುದೋ ಅಮಲು ಪದಾರ್ಥ ಸೇವನೆ ಮಾಡಿರುವಂತೆ ಕಂಡು ಬಂದಿದ್ದರಿಂದ ಸದ್ರಿ ವ್ಯಕ್ತಿಯನ್ನು ಹಿಡಿದು ವಿಚಾರಿಸಲಾಗಿ ತನ್ನ ಹೆಸರು ನವೀನ್ ಕುಮಾರ್ @ ಅಶೋಕ್ ಎಂಬುದಾಗಿಯೂ ತಾನು ಗಾಂಜಾ ಎಂಬ ಅಮಲು ಪದಾರ್ಥವನ್ನು ಸಿಗರೇಟಿನಲ್ಲಿ  ಹಾಕಿ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಂತೆ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಲ್ಲಿ ಆತನು ಗಾಂಜಾ ಎಂಬ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ ಮೇರೆಗೆ ಆರೋಪಿಯ ವಿರುದ್ದ ಎನ್.ಡಿ.ಪಿ.ಎಸ್. ಕಾಯ್ದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ” ಎಂಬಿತ್ಯಾದಿ

 

ಇತ್ತೀಚಿನ ನವೀಕರಣ​ : 05-04-2022 07:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080