ಅಭಿಪ್ರಾಯ / ಸಲಹೆಗಳು

Crime Reported in Mangalore East Traffic PS       

ಪಿರ್ಯಾದಿದಾರರಾದ ರಾಜೇಶ್ ಎಂ (36) ಎಂಬವರು ಕೆಲಸದ ನಿಮಿತ್ತ ತಮ್ಮ ಬಾಬ್ತು  KA-19-ES-5287 ನಂಬ್ರದ  ಮೋಟಾರ್ ಸೈಕಲನ್ನು ಚಲಾಯಿಸಿಕೊಂಡು ಪದವು ಕಡೆಯಿಂದ ಕುಂಟಿಕಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ನೇ ಡಾಮಾರು ರಸ್ತೆಯಲ್ಲಿ ಹೋಗುತ್ತಿದ್ದಾಗ ಸಮಯ ಸುಮಾರು ಸಂಜೆ 16.30 ಗಂಟೆಗೆ ಕೆ.ಪಿ.ಟಿ ವೃತ್ತದ ಬಳಿ ತಲುಪುತ್ತಿದ್ದಂತೆ  ಯೆಯ್ಯಾಡಿ ಕಡೆಯಿಂದ ಸರ್ಕ್ಯೂಟ್ ಹೌಸ್  ಕಡೆಗೆ  KA-19-AC-9857  ನಂಬ್ರದ ಪಿಕ್-ಅಪ್ ವಾಹನವನ್ನು ಅದರ ಚಾಲಕ ಸುಲೈಮಾನ ಎಂಬವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮತ್ತು ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರು ಸವಾರಿ ಮಾಡುತ್ತಿದ್ದ ಮೋಟಾರ್ ಸೈಕಲಿನ ಬಲಬದಿಗೆ ಡಿಕ್ಕಿ ಪಡಿಸಿದ ಪರಿಣಾಮ ಪಿರ್ಯಾದಿದಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು, ಎಡಭುಜಕ್ಕೆ  ಮತ್ತು ಬಲಕಾಲಿಗೆ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯ  ಮತ್ತು ಬಲಭುಜದ ಬಳಿ ತರಚಿದ ರೀತಿಯ ಗಾಯಗೊಂಡವರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ತದನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುತ್ತಾರೆ. ಅಪಘಾತ ಪಡಿಸಿದ  ಪಿಕ್-ಅಫ್ ವಾಹನದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವರೇ  ಎಂಬಿತ್ಯಾದಿ.

 

Crime Reported in Mangalore East PS

ಪಿರ್ಯಾದಿದಾರರಾದ ಶ್ರೀಧರ ಪ್ರಾಯ 21 ವರ್ಷ ಎಂಬವರ ತಂಗಿ ಕುಮಾರಿ ರಂಜಿತ ಪ್ರಾಯ 19 ವರ್ಷ ಎಂಬವರು ಮಂಗಳೂರು ನಗರದ ಬೆಂದೂರ್ ವೆಲ್ ಬಳಿ ಇರುವ ವೆಲ್ಲಿಸ್ ಕೊರ್ಟ್ ಅಪಾರ್ಟಮೆಂಟನ ಮನೆಯೊಂದರಲ್ಲಿ ಎರಡು ವರ್ಷದಿಂದ ಮನೆ ಕೆಲಸ ಮಾಡಿಕೊಂಡಿದ್ದವಳು ದಿನಾಂಕ 17-12-2021 ರಂದು ಬೆಳಿಗ್ಗೆ 8.50 ಗಂಟೆ ಸುಮಾರಿಗೆ ಮನೆಯಲ್ಲಿ ಯಾರು ಇಲ್ಲದಿರುವ ಸಮಯ ಯಾರಿಗೂ ಹೇಳದೇ ಕೇಳದೇ ಮನೆ ಬಿಟ್ಟು ಹೋಗಿದ್ದು ನಂತರ ಮನೆಗೂ ಬಾರದೇ ಊರಿಗೂ ಹೋಗದೇ ಕಾಣೆಯಾಗಿರುತ್ತಾರೆ. ಕಾಣೆಯಾದ ತಂಗಿಯ ಬಗ್ಗೆ ಅಕ್ಕಪಕ್ಕದ ಮನೆಯಲ್ಲಿ ಮತ್ತು ಸಂಬಂಧಿಕರ ಮನೆಯಲ್ಲಿ ವಿಚಾರಿಸಿ ಪತ್ತೆಯಾಗದೇ ಇರುವುರಿಂದ ಈ ದಿನ ತಡವಾಗಿ ದೂರು ನೀಡಿರುವುದಾಗಿದೆ ಎಂಬಿತ್ಯಾದಿ.

ಕಾಣೆಯಾದವರ ಚಹರೆ

ಹೆಸರು : ರಂಜಿತ

ಪ್ರಾಯ : 19 ವರ್ಷ

ಎತ್ತರ :4.9 ಅಡಿ

ಬಣ್ಣ : ಗೋದಿ ಮೈ ಬಣ್ಣ, ಸಪೂರ ಶರೀರ

ಭಾಷೆ : ಕನ್ನಡ

ಬಟ್ಟೆ : ಗುಲಾಬಿ ಬಣ್ಣದ ಚೂಡಿದಾರ ಮತ್ತು ಪ್ಯಾಂಟ್

ವಿಧ್ಯಾಭ್ಯಾಸ- 9ನೇ ತರಗತಿ

 

Crime Reported in Moodabidre PS

 ಪಿರ್ಯಾದಿ SATHISH KOTIAN ದಾರರು ದಿನಾಂಕ: 18-11-2021  ರಂದು ಬೆಳಗ್ಗೆ ತನ್ನ ವೈಯಕ್ತಿಕ ಕೆಲಸದ ನಿಮಿತ್ತ ಮೂಡಬಿದರೆ ಪೇಟೆಗೆ ಬರುತ್ತಿರುವಾಗ ಸೈಡ್ ಮಿರರ್ ನಲ್ಲಿ ನೋಡಿದಾಗ ಹಿಂದಿನಿಂದ ಪಿರ್ಯಾದಿದಾರರ ಪರಿಚಯದ ಮುಸ್ತಾಕ್ ಅಹ್ಮದ್ ರವರು ತಮ್ಮ ಬಾಬ್ತು ಕೆ.ಎ-19-ಇಬಿ-6489 ನೇ ಮೋಟರ್ ಬೈಕ್ ನ್ನು ಸವಾರಿ ಮಾಡಿಕೊಂಡು ಬರುತ್ತಿದ್ದರು, ಸಮಯ ಸುಮಾರು 10-15 ಗಂಟೆಗೆ ಕೈಕಂಬ ಜಂಕ್ಷನ್ ಬಳಿಯಿರುವ ಮರದ ಮಿಲ್ ಹತ್ತಿರ ತಲುಪುತ್ತಿದ್ದಂತೆ ಮುಸ್ತಾಕ್ ಅಹ್ಮದ್ ರವರ ಹಿಂದಿನಿಂದ ಬಂದ ಬಿಳಿ ಬಣ್ಣದ ಕಾರೊಂದು ಅದರ ಚಾಲಕನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಚಾಲನೆ ಮಾಡಿಕೊಂಡು ಬಂದು ಮುಸ್ತಾಕ ಅಹ್ಮದ್ ರವರು ಸವಾರಿಮಾಡಿಕೊಂಡು ಹೋರಟಿದ್ದ ಕೆ.ಎ-19-ಇಬಿ-6489 ನೇ ಮೋಟರ್ ಬೈಕ್ ಗೆ ಡಿಕ್ಕಿ ಪಡಿಸಿ ಕಾರನ್ನು ನಿಲ್ಲಿಸದೇ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸದೇ ಹಾಗೂ ಠಾಣೆಗೂ ಮಾಹಿತಿ ನೀಡದೇ ಪರಾರಿಯಾಗಿರುತ್ತಾನೆ. ಈ ರಸ್ತೆ ಅಪಘಾತದಿಂದಾಗಿ ಮುಸ್ತಾಕ್ ಅಹ್ಮದ್ ರವರು ರಸ್ತೆಗೆ ಬಿದ್ದಿದ್ದು ಬಿದ್ದ ಪರಿಣಾಮ ತಲೆಗೆ ಮತ್ತು ಕೈ ಕಾಲುಗಳಿಗೆ ಗಾಯದ ನೋವುಗಳಾಗಿರುತ್ತವೆ. ಪಿರ್ಯಾದಿದಾರರು ಮತ್ತು ಸಾರ್ವಜನಿಕರ ಸಹಾಯದಿಂದ ಚಿಕಿತ್ಸೆಗಾಗಿ ಮೂಡಬಿದರೆಯ ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿಗೆ ಕರೆದುಕೊಂಡು ಹೋಗಿರುವುದಾಗಿದೆ ಎಂಬಿತ್ಯಾದಿ.

                   

ಇತ್ತೀಚಿನ ನವೀಕರಣ​ : 18-12-2021 06:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080