ಅಭಿಪ್ರಾಯ / ಸಲಹೆಗಳು

Crime Reported in Mangalore East PS

, ದಿನಾಂಕ 19-10-2021 ರಂದು 00-30ರ  ವೇಳೆಗೆ ಇಲಾಖಾ ವಾಹನ ದರಲ್ಲಿ ಪಿರ್ಯಾದಿ Jagannathದಾರರು ಹಾಗೂ ಸಿಬ್ಬಂಧಿಯವರು ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಬಿಕರ್ನಕಟ್ಟೆ ಕೈಕಂಬ ಪ್ಲೈಓವರ್   ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಯುವಕನು ನಿಂತು ಸಿಗರೇಟು ಸೇದುತ್ತಿದ್ದು , ಅವರ ಬಳಿಗೆ ಹೋಗಿ ವಿಚಾರಿಸಿದಲ್ಲಿ ಅವರು ಮಾತನಾಡುವಾಗ ಮಾತು ತೊದಲುತ್ತಿದ್ದು ಬಾಯಿಯಿಂದ ಯಾವುದೋ ಅಮಲು ಪದಾರ್ಥ ಸೇವನೆ ಮಾಡಿರುವ ವಾಸನೆ ಬರುತ್ತಿದ್ದುದರಿಂದ ಅವರುಗಳನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿದಲ್ಲಿ , ಗಾಂಜಾ ತುಂಬಿಸಿದ ಒಂದು ಸಿಗರೇಟನ್ನು ಇಬ್ಬರು ಜೊತೆಯಾಗಿ ಸೇವನೆ ಮಾಡಿರುವುದಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡ ಮೇರೆಗೆ ಅವರನ್ನು 00-45 ರ ವೇಳೆಗೆ ವಶಕ್ಕೆ ಪಡೆದುಕೊಂಡು ಇಲಾಖಾ ವಾಹನದಲ್ಲಿ ಕುಳ್ಳಿರಿಸಿ ವೈದ್ಯಕೀಯ ತಪಾಸಣೆಗೆ ಕಳುಹಿಸಿಕೊಟ್ಟಲ್ಲಿ ಆರೋಪಿಗಳಿಬ್ಬರು ಗಾಂಜಾ ಸೇವನೆ ಮಾಡಿರುವ ಬಗ್ಗೆ ವ್ಯೆದಕೀಯ ಪರೀಕ್ಷೆಯಿಂದ ದ್ರಡಪಟ್ಟಿರುವುದರಿಂದ ಇವರ ವಿರುದ್ದ ಮಾದಕ ದ್ರವ್ಯ ಕಾಯ್ದೆ ಅಡಿ ಕಾನೂನು ಕ್ರಮ ಕೈಗೊಂಡಿರುವುದಾಗಿದೆ.

 

Crime Reported in Traffic North PS

ದಿನಾಂಕ:19-10-2021 ರಂದು ಪಿರ್ಯಾದಿದಾರರಾದ ಉಮ್ಮರ್ ಫಾರೂಕ್ ರವರು ಕೆ.ಬಿ.ಎಸ್ ಬಳಿ ಇರುವ ಮೊಹಿಯುದ್ದೀನ್ ಜುಮ್ಮ ಮಸೀದಿಗೆ ಪ್ರಾರ್ಥನೆಗೆ ಹೋಗಿ ಪ್ರಾರ್ಥನೆ ಮುಗಿಸಿ ಮಸೀದಿಯ ಎದುರು ನಿಂತುಕೊಂಡಿದ್ದ ಸಮಯ ಸುಮಾರು ಮಧ್ಯಾಹ್ನ 12-00 ಗಂಟೆಗೆ ಬಜ್ಪೆ ಕಡೆಯಿಂದ ಕೆ.ಬಿ.ಎಸ್ ಜಂಕ್ಷನ್ ಕಡೆಗೆ KA-19-B-2361 ನಂಬ್ರದ ಲಾರಿಯನ್ನು ಅದರ ಚಾಲಕ ಕುಮಾರ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಕೆ.ಬಿ.ಎಸ್ ಬಳಿ ಇರುವ ಮೊಹಿಯುದ್ದೀನ್ ಜುಮ್ಮ ಮಸೀದಿ ಎದುರು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಫಾತಿಮಾ ರುಹಾ (10 ವರ್ಷ) ಹೆಣ್ಣು ಮಗುವಿಗೆ ಡಿಕ್ಕಿ ಪಡಿಸಿದ ಪರಿಣಾಮ ಫಾತಿಮಾ ರುಹಾ ಳು ರಸ್ತೆಗೆ ಬಿದ್ದು ಲಾರಿಯ ಚಕ್ರವು ಎಡಕಾಲಿನ ಮೇಲೆ ಹರಿದು ಹೋಗಿ ಎಡಕಾಲಿನ ಪಾದದ ಬಳಿ ಗಂಭೀರ ಸ್ವರೂಪದ ಗಾಯವಾಗಿ ಚಿಕಿತ್ಸೆಯ ಬಗ್ಗೆ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಯ ಬಗ್ಗೆ ತೇಜಸ್ವಿನಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ. ಅಲ್ಲದೇ ಅಪಘಾತ ಪಡಿಸಿದ ಲಾರಿ ಚಾಲಕನು ಲಾರಿಯನ್ನು ಅಪಘಾತ ಸ್ಥಳದಲ್ಲಿ ನಿಲ್ಲಿಸದೇ ಮುಂದೆ ಚಲಾಯಿಸಿಕೊಂಡು ಹೋಗಿ ನಿಲ್ಲಿಸಿರುವುದಾಗಿದೆ ಎಂಬಿತ್ಯಾದಿ.

Crime Reported in Bajpe PS         

ಫಿರ್ಯಾದಿ Vineeth Megharajದಾರರು ದಿನಾಂಕ 18.10.2021 ರಂದು ತನ್ನ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 19 ಇವಿ 3195 ನೇದರಲ್ಲಿ ತನ್ನ ಸ್ನೇಹಿತ ಶೈಲೇಶ್ ಎಂಬವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಪೊಳಲಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಾ ಸಮಯ ಸುಮಾರು 20.15 ಗಂಟೆಗೆ  ಮಂಗಳೂರು ತಾಲೂಕು, ಕೊಳಂಬೆ ಗ್ರಾಮದ, ಸುಂಕದಕಟ್ಟೆ ಬಳಿ ತಲುಪುತ್ತಿದ್ದಂತೆಯೇ ಎದುರಿನಿಂದ ಅಂದರೆ ಬಜಪೆ ಕಡೆಯಿಂದ ಕೈಕಂಬ  ಕಡೆಗೆ ದ್ವಿಚಕ್ರ ವಾಹನ ನಂಬ್ರ ಕೆಎ 47 ಆರ್ 2436 ನೇದನ್ನು ಅದರ ಸವಾರ ಸಂತೋಷ್ ರವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದು ಎದುರಿನಿಂದ ಹೋಗುತ್ತಿದ್ದ ಲಾರಿಯೊಂದನ್ನು ಓವರ್ ಟೇಕ್ ಮಾಡುತ್ತಾ ರಸ್ತೆಯ ತೀರಾ ಬಲಬದಿಗೆ ಬಂದು ಪಿರ್ಯಾದಿದಾರರ ಮೋಟಾರ್ ಸೈಕಲ್ ನ ಎಡಬದಿಗೆ ಡಿಕ್ಕಿಯಾದ ಪರಿಣಾಮ ಪಿರ್ಯಾದಿದಾರರು ಹಾಗೂ ಸಹಸವಾರ ಶೈಲೇಶ್ ರವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಪಿರ್ಯಾದಿದಾರರ ಎಡಗೈ ಬೆರಳಿಗೆ ಮೂಳೆ ಮುರಿತದ ಗಾಯ ಹಾಗೂ ಶೈಲೇಶ್ ರವರಿಗೆ ಸಣ್ಣ ಪುಟ್ಟ ಗುದ್ದಿದ ರೀತಿಯ ಗಾಯವಾಗಿರುತ್ತದೆ. ಪಿರ್ಯಾದಿದಾರರು ಚಿಕಿತ್ಸೆ ಬಗ್ಗೆ ಮಂಗಳೂರು ತೇಜಸ್ವಿನಿ  ಆಸ್ಪತ್ರೆಯಲ್ಲಿ  ಒಳರೋಗಿಯಾಗಿ ದಾಖಲಾಗಿರುತ್ತಾರೆ” ಎಂಬಿತ್ಯಾದಿ.

 

 

ಇತ್ತೀಚಿನ ನವೀಕರಣ​ : 19-10-2021 04:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080