ಅಭಿಪ್ರಾಯ / ಸಲಹೆಗಳು

Crime Reported in : Mangalore Traffic East PS

ದಿನಾಂಕ 13-07-2022 ರಂದು ರಾತ್ರಿ ಸಮಯ ಸುಮಾರು 7:50 ಗಂಟೆಗೆ ಪಿರ್ಯಾದಿದಾರರಾದ ಶ್ರೀ  ಬ್ರಿಯಾನ್ ಸ್ಟಾನಿ ವಾಲ್ಡರ್ ರವರು ಅತ್ತಾವರದ ಕಾಪ್ರಿಗುಡ್ಡ ಮಸೀದಿ ಬಳಿಯ ಗ್ರಾಹಕರೊಬ್ಬರಿಗೆ ಫುಡ್ ಡೆಲಿವರಿ ಮಾಡಿ ತಾನು ಕೆಲಸ ಮಾಡಿಕೊಂಡಿರುವ ಹೊಟೇಲಿನವರಿಗೆ ಸಂಬಂಧಿಸಿದ KA-19-EP-5437 ನಂಬ್ರದ ಸ್ಕೂಟರನ್ನು ಸವಾರಿ ಮಾಡಿಕೊಂಡು ಕಾಸಾ ಗ್ರಾಂಡ್ ಅಪಾರ್ಟ್ ಮೆಂಟ್ ಕಡೆಯಿಂದ ಆವೇರಿ ಜಂಕ್ಷನ್ ಕಡೆಗೆ ಸಾಗಿರುವ ಅತ್ತಾವರ ಸ್ಟರಕ್ ರಸ್ತೆಯಲ್ಲಿ ಬರುತ್ತಾ ಮ್ಯಾಕ್ ದ ಎಡ್ರೆಸ್ ಅಪಾರ್ಟ್ ಮೆಂಟ್ ಎದುರಿನ ರಸ್ತೆಗೆ ಬಂದು ತಲುಪುತ್ತಿದ್ದಂತೆ ಎದುರುಗಡೆಯಿಂದ ಅಂದರೆ ಆವೇರಿ ಜಂಕ್ಷನ್ ಕಡೆಯಿಂದ ಕಾಸಾ ಗ್ರಾಂಡ್ ಅಪಾರ್ಟ್ ಮೆಂಟ್ ಕಡೆಗೆ KA-19-MG-1936 ನಂಬ್ರದ ಕಾರನ್ನು  ಅದರ ಚಾಲಕರು ನಿರ್ಲಕ್ಯತನ ಹಾಗೂ ಅಜಾಗರೂಕತೆಯಿಂದ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರು ಸವಾರಿ ಮಾಡುತ್ತಿದ್ದ ಸ್ಕೂಟರಿಗೆ ಢಿಕ್ಕಿಪಡಿಸಿದ ಪರಿಣಾಮ ಪಿರ್ಯಾದಿದಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು, ಬಲ ಕಾಲಿನ ಕೋಲು ಕಾಲಿಗೆ ಮೂಳೆ ಮುರಿತದ ಗಂಭೀರ ಗಾಯ ಉಂಟಾದವರನ್ನು ಅಪಘಾತ ಪಡಿಸಿದ ಕಾರು ಚಾಲಕರು ಆಟೋ ರಿಕ್ಷಾವೊಂದರಲ್ಲಿ ಚಿಕಿತ್ಸೆ ಬಗ್ಗೆ ಯುನಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದುಕೊಂಡಿರುವುದಾಗಿದೆ.  ಎಂಬಿತ್ಯಾದಿ.

 

Crime Reported in : Mangalore Rural PS

ದಿನಾಂಕ: 01-08-2022 ರಂದು 21-00 ಗಂಟೆಗೆ ಮಂಗಳೂರು ತಾಲೂಕು ಅಡ್ಯಾರ್ ಗ್ರಾಮದ ಅಡ್ಯಾರ್ ಕಟ್ಟೆ ಬಸ್ಸು ನಿಲ್ದಾಣದ ಬಳಿ ಮೊಹಮ್ಮದ್ ರಿಜ್ವಾನ್, ಪ್ರಾಯ: 34 ವರ್ಷ,  ವಾಸ: ಪಕಲಡ್ಕ ಯುವಕ ಮಂಡಳದ ಬಳಿ ಮನೆ, ಬಜಾಲ್ ಗ್ರಾಮ ಮತ್ತು ಅಂಚೆ, ಮಂಗಳೂರು ತಾಲೂಕು. ಎಂಬವರು ಗಾಂಜಾ ಸೇವನೆ ಮಾಡುತ್ತಿರುವವನನ್ನು  ವಶಕ್ಕೆ ಪಡೆದುಕೊಂಡು ವೈದ್ಯಾಧಿಕಾರಿಯವರು, ಎ. ಜೆ ಆಸ್ಪತ್ರೆ ಕುಂಟಿಕಾನ, ಮಂಗಳೂರು ತಾಲೂಕುರವರ ಮುಂದೆ ಹಾಜರುಪಡಿಸಿ ತಪಾಸಣೆಗೊಳಪಡಿಸಿದಾಗ ಆತನು ಗಾಂಜಾ ಸೇವಿಸಿರುವ ಬಗ್ಗೆ ದೃಡಪಟ್ಟಿದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವುದು ಎಂಬಿತ್ಯಾದಿ.

 

Crime Reported in : Mangaluru Traffic North PS

 ದಿನಾಂಕ: 31-08-2022 ರಂದು ಪಿರ್ಯಾದಿದಾರ DHANAJAYA KUMAR ತಂಗಿ ನವ್ಯ ರವರು ಅವರ ಪರಿಚಯದ ಪ್ರಜ್ವಲ್ ರವರ ಜೊತೆಯಲ್ಲಿ KA-19-HA-6811 ನಂಬ್ರದ ಮೋಟಾರ್ ಸೈಕಲ್ ನಲ್ಲಿ ಸಹಸವಾರನಾಗಿ ಕುಳಿತುಕೊಂಡು ಕಂಕನಾಡಿಯಿಂದ ತಣ್ಣೀರುಬಾವಿ ಕಡೆಗೆ ಹೋಗುತ್ತಿದ್ದ ಸಮಯ ಸಂಜೆ 3.00 ಗಂಟೆಗೆ ಸಿಲ್ವರ್ ಜುಬ್ಲಿ ಗೇಟಿನ ಬಳಿ ತಲುಪಿದಾಗ ಮೋಟಾರ್ ಸೈಕಲನ್ನು ಪ್ರಜ್ವಲನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಹೋಗಿ ರಸ್ತೆಗೆ ಅಡ್ಡಲಾಗಿ ಹಾಕಿರುವ ಹಮ್ಸನ್ನು ಗಮನಿಸದೆ ಚಲಾಯಿಸಿದ ಪರಿಣಾಮ ಮೋಟಾರ್ ಸೈಕಲ್ ಸವಾರರ ನಿಯಂತ್ರಣ ತಪ್ಪಿ ಮೋಟಾರ್ ಸೈಕಲ್ ಸವಾರ ಮತ್ತು ಸಹಸವಾರೆ ಮೋಟಾರ್ ಸೈಕಲ್ ಸಮೇತಾ ರಸ್ತೆಗೆ ಬಿದ್ದು, ಸಹಸವಾರೆ ನವ್ಯಾಳಿಗೆ ಹಣೆಯ ಬಲಬದಿಗೆ ರಕ್ತಗಾಯ ಮತ್ತು ಅಲ್ಲಲ್ಲಿ ತರಚಿದ ಗಾಯ ಹಾಗೂ ಮೋಟಾರ್ ಸೈಕಲ್ ಸವಾರ ಪ್ರಜ್ವಲ್ ಗೆ ಬಲಕೈಗೆ  ಮತ್ತು ಬಲಕಾಲಿಗೆ ತರಚಿದ ಗಾಯವಾಗಿ ಎ ಜೆ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 02-08-2022 04:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080