ಅಭಿಪ್ರಾಯ / ಸಲಹೆಗಳು

Crime Reported in :  Mangalore East Traffic PS    

ಪಿರ್ಯಾದಿದಾರರಾದ ಗಂಗಾಧರ ಎಂಬುವರು ಸುಮಾರು 20 ವರ್ಷಗಳಿಂದ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಾ ಮಾರ್ನಮಿಕಟ್ಟೆಯ ಕುಡ್ಪಾಡಿ ಬಪ್ಪಲ್ ಎಂಬಲ್ಲಿರುವ ಸೈಟ್ ಒಂದರಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ವಾಸವಾಗಿದ್ದು, ದಿನಾಂಕ 30-08-2022 ರಂದು ಸಂಜೆ ಜೆಪ್ಪು ಮಾರ್ಕೇಟಿಗೆ ಸಾಮಾನು ತರಲೆಂದು ಹೋಗಿ, ವಾಪಾಸು ನಡೆದುಕೊಂಡು ಜೆಪ್ಪು ಮುಖ್ಯ ರಸ್ತೆಯ ಮೂಲಕ  ಎಂ.ಆರ್. ಭಟ್ ಲೇನ್ ಮಾರ್ಗವಾಗಿ ಮನೆಯ ಕಡೆಗೆ  ಬರುತ್ತಿರುವಾಗ ರಾತ್ರಿ ಸಮಯ ಸುಮಾರು 9.15 ಗಂಟೆಗೆ ಜೆಪ್ಪು ಮುಖ್ಯ ರಸ್ತೆಯ ರೈಲ್ವೇ ಓವರ್ ಬ್ರಿಡ್ಜಿನಿಂದ ಸ್ವಲ್ಪ ದೂರ ಮುಂದೆ ಇರುವ ಸೈಂಟ್ ಆಂಟೋನಿ ಚರ್ಚ್ ಬಳಿ ತಲುಪುತ್ತಿದ್ದಂತೆ ಮಾರ್ನಮಿಕಟ್ಟೆ ಕಡೆಯಿಂದ ಜಪ್ಪು ಕಡೆಗೆ ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ KA-19-EY-3124 ನೊಂದಣಿ ನಂಬ್ರದ ಬೈಕನ್ನು ಅದರ ಸವಾರ ಜೈಸನ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರಿಗೆ ಡಿಕ್ಕಿಪಡಿಸಿದ್ದು ಡಿಕ್ಕಿಯ ಪರಿಣಾಮ ಪಿರ್ಯಾದಿದಾರರು ರಸ್ತೆಗೆ ಎಸೆಯಲ್ಪಟ್ಟು,  ಎಡ ಕಾಲಿನ ಕೋಲುಕಾಲಿಗೆ ರಕ್ತಗಾಯ ಹಾಗೂ ಹಣೆಯಲ್ಲಿ ತರಚಿದ ಗಾಯಗಳಾದವರನ್ನು  ಡಿಕ್ಕಿಪಡಿಸಿದ ಬೈಕ್ ಸವಾರನು ಪಿರ್ಯಾದಿದಾರರನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪಿರ್ಯಾದಿದಾರರನ್ನು ಪರೀಕ್ಷಿಸಿದ ವೈದ್ಯರು ಎಡ ಕೋಲು ಕಾಲಿಗೆ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯವಾಗಿರುವುದಾಗಿ  ತಿಳಿಸಿ, ಒಳರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ ಎಂಬಿತ್ಯಾದಿ.

Crime Reported in :Traffic North Police Station                     

ದಿನಾಂಕ: 31-08-2022 ರಂದು ಸಂಜೆ 7:30 ಗಂಟೆಗೆ ಪಿರ್ಯಾದಿ Nikhil Kanchan ದಾರರ ಚಿಕ್ಕಪ್ಪ ನಾಗೇಶ್ ಕಾಂಚನ್ ರವರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಕಡೆಯಿಂದ ತನ್ನ ಮನೆ ಕಡೆಗೆ ಹೋಗುವರೇ ಅವರ ಬಾಬ್ತು KA-19-EY-9949 ನಂಬ್ರದ ಮೋಟಾರ್ ಸೈಕಲನ್ನು ಸವಾರಿ ಮಾಡಿಕೊಂಡು ಬಪ್ಪನಾಡು ದ್ವಾರದ ಬಳಿ ಇರುವ NH 66ರ ತೆರೆದ ಡಿವೈಡರ್ ಬಳಿ ತಲುಪುತ್ತಿದ್ದಂತೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ TN-42-AA-9221 ನಂಬ್ರದ ಲಾರಿಯನ್ನು ಅದರ ಚಾಲಕ ಸಂದೀಪ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲಿನ ಹಿಂಬದಿಗೆ ಡಿಕ್ಕಿಪಡಿಸಿದ ಪರಿಣಾಮ ಪಿರ್ಯಾದಿದಾರರ ಚಿಕ್ಕಪ್ಪ ಮೋಟಾರ್ ಸೈಕಲ್ ಸಮೇತ ಡಾಮಾರು ರಸ್ತೆಗೆ ಎಸೆಯಲ್ಪಟ್ಟು ಅವರ ಬಲ ಹಣೆಯ ಹುಬ್ಬಿನ ಬಳಿ ರಕ್ತ ಗಾಯ, ಬಲಕಣ್ಣಿನ ಕೆಳಭಾಗ, ಮೂಗಿನ ಮೇಲೆ ತರಚಿದ ನಮೂನೆಯ ಗಾಯ ಆಗಿರುತ್ತದೆ, ಅಲ್ಲದೇ ಮೇಲ್ದವಡೆಯ ಒಂದು ಹಲ್ಲು ಮುರಿದು ಬಿದ್ದು ಹೋಗಿರುತ್ತದೆ ಈ ಬಗ್ಗೆ ಮುಲ್ಕಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆ ಬಗ್ಗೆ ಸುರತ್ಕಲ್ ನ ಅಥರ್ವ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 01-09-2022 05:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080