ಅಭಿಪ್ರಾಯ / ಸಲಹೆಗಳು

Crime Reported in : Mangalore traffic West ps

ದಿನಾಂಕ 09-08-2022 ರಂದು ಪಿರ್ಯಾದುದಾರರು DEVIPRASAD ಮಂಗಳೂರು ನಗರದ ರಾವ್ ಮತ್ತು ರಾವ್  ಬಳಿ ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 09.28 ಗಂಟೆಗೆ ಬಂದರು ಕಡೆಯಿಂದ ರಾವ & ರಾವ್ ರಸ್ತೆ ಕಡೆಗೆ KA-19- EB-4140 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು 1+1 ರ ಬದಲು 2+1 ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಎಂಬಿತ್ಯಾದಿ

 

2) ದಿನಾಂಕ 09-08-2022 ರಂದು ಪಿರ್ಯಾದುದಾರರು DEVIPRASAD ಮಂಗಳೂರು ನಗರದ ಹಳೆ ಬಂದರು ರಸ್ತೆಯ   ಬಳಿ ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 12.16 ಗಂಟೆಗೆ ಬಂದರು ಕಡೆಯಿಂದ ರಾವ & ರಾವ್ ರಸ್ತೆ ಕಡೆಗೆ KA-19- HE-2160 ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು 1+1 ರ ಬದಲು 1+2 ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸವಾರ ಮತ್ತು ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಎಂಬಿತ್ಯಾದಿ

 

Crime Reported in : Mangalore traffic  East ps

ಪಿರ್ಯಾದಿದಾರರು VISHWANATH RAI ದಿನಾಂಕ 09-08-2022 ರಂದು ರೌಂಡ್ಸ್ ಕರ್ತವ್ಯದ ಬಗ್ಗೆ ಮಂಗಳೂರು ನಗರದ ಮಂಗಳಾದೇವಿ ಬಸ್ ಸ್ಟಾಪ್ ಬಳಿ ಕರ್ತವ್ಯದಲ್ಲಿದ್ದ ಸಮಯ ಬೆಳಿಗ್ಗೆ ಸಮಯ ಸುಮಾರು 10.50 ಗಂಟೆಗೆ ಬೋಳಾರ ಮಾರಿಗುಡಿ  ಕಡೆಯಿಂದ ಕಾಸಿಯಾ ಜಂಕ್ಷನ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KA-19-Y-9108 ನಂಬ್ರದ ಮೋಟಾರ್ ಸೈಕಲ್ ಸವಾರನು ತನ್ನ ಜೊತೆಗೆ ಹಿಂಬದಿಯಲ್ಲಿ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಇಬ್ಬರೂ ಹೆಲ್ಮೆಟ್ ಧರಿಸದೇ ಬಂದಿದ್ದು,  ಸದ್ರಿ ವಾಹನವನ್ನು  ನಿಲ್ಲಿಸುವಂತೆ ಪಿರ್ಯಾದಿದಾರರು ಸೂಚಿಸಿದಾಗ ಸವಾರನು ಮೋಟಾರ್ ಸೈಕಲನ್ನು ನಿಲ್ಲಿಸದೆ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಹಾನಿಯುಂಟಾಗುವ ರೀತಿಯಲ್ಲಿ ವಾಹನವನ್ನು ಚಲಾಯಿಸಿಕೊಂಡು ಮುಂದೆ ಹೋಗಿದ್ದು, ಪಿರ್ಯಾದಿದಾರರು  ಜೊತೆಯಲ್ಲಿದ್ದ ಸಿಬ್ಬಂದಿಯವರ ಮೊಬೈಲ್ ನಲ್ಲಿ ವೀಡಿಯೋ ಹಾಗೂ ಪೋಟೋ ತೆಗೆಸಿದ್ದು, ಮೋಟಾರ್ ಸವಾರನು ತನ್ನ ಪ್ರಾಣ ಹಾಗೂ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ವಾಹವನ್ನು ಚಲಾಯಿಸಿದ್ದರಿಂದ KA-19-Y-9108 ಮೋಟಾರ್ ಸೈಕಲ್  ಸವಾರ ಹಾಗೂ ಸಹ ಸವಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಎಂಬಿತ್ಯಾದಿ.

 

2) ಪಿರ್ಯಾದಿದಾರರು VISHWANATH RAI ದಿನಾಂಕ 09-08-2022 ರಂದು ರೌಂಡ್ಸ್ ಕರ್ತವ್ಯದ ಬಗ್ಗೆ ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಇರುವ ಶ್ರೀದೇವಿ ಹೊಟೇಲ್ ಬಳಿ ಕರ್ತವ್ಯದಲ್ಲಿದ್ದ ಸಮಯ ಬೆಳಿಗ್ಗೆ ಸಮಯ ಸುಮಾರು 10.55 ಗಂಟೆಗೆ ಕಾಸಿಯಾ ಜಂಕ್ಷನ್ ಕಡೆಯಿಂದ ಮಂಗಳಾದೇವಿ ದೇವಸ್ಥಾನದ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ KA-19-HG-9815  ನಂಬ್ರದ ಮೋಟಾರ್ ಸೈಕಲ್ ಸವಾರನು ತನ್ನ ಜೊತೆಗೆ ಹಿಂಬದಿಯಲ್ಲಿ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಇಬ್ಬರೂ ಹೆಲ್ಮೆಟ್ ಧರಿಸದೇ ಬಂದಿದ್ದು,  ಸದ್ರಿ ವಾಹನವನ್ನು  ನಿಲ್ಲಿಸುವಂತೆ ಪಿರ್ಯಾದಿದಾರರು ಸೂಚಿಸಿದಾಗ ಸವಾರನು ಮೋಟಾರ್ ಸೈಕಲನ್ನು ನಿಲ್ಲಿಸದೆ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಹಾನಿಯುಂಟಾಗುವ ರೀತಿಯಲ್ಲಿ ವಾಹನವನ್ನು ಚಲಾಯಿಸಿಕೊಂಡು ಮುಂದೆ ಹೋಗಿದ್ದು, ಪಿರ್ಯಾದಿದಾರರು  ಜೊತೆಯಲ್ಲಿದ್ದ ಸಿಬ್ಬಂದಿಯವರ ಮೊಬೈಲ್ ನಲ್ಲಿ ವೀಡಿಯೋ ಹಾಗೂ ಪೋಟೋ ತೆಗೆಸಿದ್ದು, ಮೋಟಾರ್ ಸವಾರನು ತನ್ನ ಪ್ರಾಣ ಹಾಗೂ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ವಾಹವನ್ನು ಚಲಾಯಿಸಿದ್ದರಿಂದ KA-19-HG-9815 ಮೋಟಾರ್ ಸೈಕಲ್  ಸವಾರ ಹಾಗೂ ಸಹ ಸವಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಎಂಬಿತ್ಯಾದಿ.

 

 

Crime Reported in : Mangalore traffic north ps

ಪಿರ್ಯಾದಿದಾರರು Vishwanatha N ದಿನಾಂಕ 09-08-2022 ರಂದು ಗಣೇಶಪುರ ಜಂಕ್ಷನಿನಲ್ಲಿ ನಿಗದಿತ ಸಮವಸ್ತ್ರ ಧರಿಸಿಕೊಂಡು ಕರ್ತವ್ಯದಲ್ಲಿದ್ದಾಗ ಬೆಳಿಗ್ಗೆ ಸಮಯ ಸುಮಾರು 11:20 ಗಂಟೆಗೆ KA-19-HB-4814 ನಂಬ್ರದ ಸ್ಕೂಟರನ್ನು ಅದರ ಸವಾರನು ಹಿಂಬದಿಯಲ್ಲಿ ಸಹ ಸವಾರರಿಬ್ಬರನ್ನು ಕುಳ್ಳಿರಿಸಿಕೊಂಡು ಮೂವರು ತಲೆಗೆ ಹೆಲ್ಮೆಟ್ ಧರಿಸದೇ ಗಣೇಶಪುರ ಕಡೆಯಿಂದ ಕಾಟಿಪಳ್ಳ ಕಡೆಗೆ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬರುತ್ತಿದ್ದವರನ್ನು ಕಂಡು ಸ್ಕೂಟರನ್ನು ನಿಲ್ಲಿಸಲು ಸೂಚನೆ ನೀಡಿದರೂ ಸೂಚನೆಯನ್ನು ಧಿಕ್ಕರಿಸಿ ಸದ್ರಿ ಸ್ಕೂಟರನ್ನುಅದರ  ಸವಾರ ಸ್ಥಳದಲ್ಲಿ ನಿಲ್ಲಿಸದೇ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಕಾಟಿಪಳ್ಳ ಕಡೆಗೆ ಹೋಗಿರುತ್ತಾರೆ ಎಂಬಿತ್ಯಾದಿ.

 

2) ಪಿರ್ಯಾದಿದಾರರು Keshava ದಿನಾಂಕ 09-08-2022 ರಂದು ಹಗಲು ಹೆದ್ದಾರಿ ಗಸ್ತು 5 ನೇಯದರಲ್ಲಿ ಕರ್ತವ್ಯದಲ್ಲಿದ್ದಾಗ ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಗಣೇಶಪುರ ಜಂಕ್ಷನಿನಲ್ಲಿ ಸಮಯ ಸುಮಾರು 11:35 ಗಂಟೆಗೆ KA-19-EM-3491 ನಂಬ್ರದ ಸ್ಕೂಟರನ್ನು ಅದರ ಸವಾರನು ಹಿಂಬದಿಯಲ್ಲಿ ಸಹ ಸವಾರರೊಬ್ಬನನ್ನು ಕುಳ್ಳಿರಿಸಿಕೊಂಡು ಇಬ್ಬರೂ ತಲೆಗೆ ಹೆಲ್ಮೆಟ್ ಧರಿಸದೇ ಗಣೇಶಪುರ ಕಡೆಯಿಂದ ಕಾಟಿಪಳ್ಳ ಕಡೆಗೆ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬರುತ್ತಿದ್ದವರನ್ನು ನಿಲ್ಲಿಸಲು ಸೂಚನೆ ನೀಡಿದರೂ ಸೂಚನೆಯನ್ನು ಧಿಕ್ಕರಿಸಿ ಸದ್ರಿ ಸ್ಕೂಟರನ್ನು ಅದರ  ಸವಾರ ಸ್ಥಳದಲ್ಲಿ ನಿಲ್ಲಿಸದೇ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಕಾಟಿಪಳ್ಳ ಕಡೆಗೆ ಹೋಗಿರುತ್ತಾರೆ ಏಂಬಿತ್ಯಾದಿ

 

Crime Reported in : Mangalore traffic south ps

ದಿನಾಂಕ 09.08.2022 ರಂದು ಪಿರ್ಯಾದಿದಾರರು SANTHOSH PADIL ಸಮವಸ್ತ್ರದಲ್ಲಿ ಸಮಯ ಸುಮಾರು ಮಧ್ಯಾಹ್ನ 01-17 ಗಂಟೆಗೆ ಕಲ್ಲಾಪು ನಾಗನಕಟ್ಟೆ ಬಳಿ ಕರ್ತವ್ಯದಲ್ಲಿರುವಾಗ ಕಲ್ಲಾಪು ಕಡೆಯಿಂದ ತೊಕ್ಕೊಟ್ಟು ಕಡೆಗೆ ಸ್ಕೂಟರ್ ನಂಬ್ರ: KA-19-HB-7478 ನೇದನ್ನು ಅದರ ಸವಾರ ಸಹ ಸವಾರನನ್ನು ಕುಳ್ಳಿರಿಸಿಕೊಂಡು ಸವಾರ ಹಾಗೂ ಸಹ ಸವಾರ ಹೆಲ್ಮೆಟ್ ಧರಿಸದೇ ತೀರಾ ನಿರ್ಲಕ್ಷ್ಯತನದಿಂದ ಮತ್ತು ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಸ್ಕೂಟರ್ ನ್ನು  ಏಕಮುಖ ರಸ್ತೆಯ ವಿರುದ್ಧವಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದುದನ್ನು ಗಮನಿಸಿದ ಪಿರ್ಯಾದಿದಾರರು ಸ್ಕೂಟರ್ ನ್ನು ನಿಲ್ಲಿಸುವಂತೆ ಸೂಚನೆ ನೀಡಿದರೂ ಸ್ಕೂಟರ್ ನ್ನು ನಿಲ್ಲಿಸದೆ ಹೋಗಿರುತ್ತಾನೆ ಎಂಬಿತ್ಯಾದಿ

 

2) ದಿನಾಂಕ:09-08-2022 ರಂದು ಪಿರ್ಯಾದಿದಾರರು RAFEEQ  ಅವರ ಬಾಬ್ತು ಸ್ಕೂಟರ್ ನಂಬ್ರ KA-19-EW-3710 ನೇದರಲ್ಲಿ ನೀರುಮಾರ್ಗದಿಂದ ಅಡ್ಯಾರ್ ಕಟ್ಟೆ ಮಾರ್ಗವಾಗಿ ಮಂಗಳೂರು ಕಡೆಗೆ ಬರುತ್ತಿರುವಾಗ ಸಮಯ ಸುಮಾರು ಬೆಳಿಗ್ಗೆ 11:15 ಗಂಟೆಗೆ ಅಡ್ಯಾರ್ ಕಟ್ಟೆ ಬಳಿಯ ಆಂದ್ರ ರೋಡ್ ಲೈನ್ಸ್ ಬಳಿ ತಲುಪಿದಾಗ ಪಿರ್ಯಾದಿದಾರರ ಹಿಂದಿನಿಂದ ಅಂದರೆ ಬಿ.ಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ NH-73  ರಲ್ಲಿ ಕಾರು ನಂಬ್ರ: KA70-M-2413  ನೆದರ ಚಾಲಕ ಯಶವಂತ ರವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಸ್ಕೂಟರ್ ಗೆ ಡಿಕ್ಕಿ ಪಡಿಸಿದ ಪರಿಣಾಮ ಅವರು ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದವರನ್ನು ಕಾರಿನ ಚಾಲಕ ಉಪಚರಿಸಿ ಹತ್ತಿರದ ಫಸ್ಟ್ ನ್ಯೂರೋ ಆಸ್ವತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿತ್ತಾರೆ ಈ ಅಪಘಾತದಿಂದ ಪಿರ್ಯಾದಿದಾರರಿಗೆ ಬಲಗಾಲಿನ ತೊಡೆಗೆ ಮೂಳೆ ಮುರಿತದ ಗಾಯ ಹಾಗೂ ತಲೆಯ ಹಿಂಬದಿಗೆ ರಕ್ತ ಗಾಯವಾಗಿರುತ್ತದೆ ಹಾಗೂ ಹೆಚ್ಚಿನ ಚಿಕಿತ್ಸೆ ಬಗ್ಗೆ ಕೆ.ಎಸ್ ಹೆಗ್ಡೆ ಆಸ್ವತ್ರೆಗೆ ದಾಖಲಾಗಿರುತ್ತಾರೆ ಎಂಬಿತ್ಯಾದಿ

                                                                                                                            

Crime Reported in : Mangalore traffic West ps

ದಿನಾಂಕ 10-08-2022 ರಂದು ಪಿರ್ಯಾದುದಾರರು DEVIPRASAD  ಮಂಗಳೂರು ನಗರದ ಹಳೆ ಬಂದರು ಗೇಟ್  ಬಳಿ ಸಮವಸ್ತ್ರದಲ್ಲಿ ಕರ್ತವ್ಯ ದಲ್ಲಿ ಇರುವ ಸಮಯ ಸುಮಾರು 09.49 ಗಂಟೆಗೆ ಬಂದರು ಮೀನಿನ ದಕ್ಕೆಯ ಕಡೆಯಿಂದ ಬದ್ರಿಯಾ ಜಂಕ್ಷನ್ ಕಡೆಗೆ KA19-HH-0557  ನೇ ದ್ವಿ ಚಕ್ರ ವಾಹನವನ್ನು ಅದರ ಸವಾರನು 1+1 ರ ಬದಲು 1+2 ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೀರಾ ನಿರ್ಲಕ್ಷತನ ಹಾಗೂ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸವಾರ ಹಾಗೂ ಸಹಸವಾರರು ಹೆಲ್ಮೆಟ್ ಧರಿಸದೇ ಚಾಲಾಯಿಸಿಕೊಂಡು ಬರುತ್ತಿದ್ದವರ ವೀಡಿಯೋ ಮತ್ತು ಫೂಟೊವನ್ನು ಸಿಬ್ಬಂದಿಯವರ ಮೊಬೈಲ್ ಫೋನ್ ನಿಂದ ತೆಗೆದಿದ್ದು ಸದ್ರಿ ದ್ವಿ ಚಕ್ರ ಸವಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಎಂಬಿತ್ಯಾದಿ

 

Crime Reported in : Mangalore traffic north ps

ಪಿರ್ಯಾದಿದಾರರು Yathish Suvarna  ದಿನಾಂಕ: 10-08-2022 ರಂದು ಅವರ ಬಾಬ್ತು KA-19-AD-7487 ನಂಬ್ರದ ಆಟೋ ರಿಕ್ಷಾದಲ್ಲಿ ಬಾಡಿಗೆಯ ಬಗ್ಗೆ ಸುರತ್ಕಲ್ ಜಂಕ್ಷನಿನಿಂದ ಮಂಗಳೂರು ಕಡೆಗೆ ರಾಹೆ 66ನೇ ಡಾಮಾರು ರಸ್ತೆಯಲ್ಲಿ ಹೋಗುತ್ತಾ ಹೊನ್ನಕಟ್ಟೆ ಜಂಕ್ಷನ್ ತಲುಪಿದಾಗ ಬೆಳಿಗ್ಗೆ ಸಮಯ ಸುಮಾರು 09:10 ಗಂಟೆಗೆ ಹೊನ್ನಕಟ್ಟೆ ಜಂಕ್ಷನಿನಲ್ಲಿ ಸಂಚಾರಿ ಪೊಲೀಸರು ನಿಲ್ಲುವ ಸೂಚನೆ ನೀಡಿದ್ದು ಅದರಂತೆ ಪಿರ್ಯಾದಿದಾರರು ಆಟೋ ರಿಕ್ಷಾವನ್ನು ನಿಲ್ಲಿಸಿದ್ದು, ಅದೇ ಸಮಯ ಪಿರ್ಯಾದಿದಾರರ ಆಟೋ ರಿಕ್ಷಾದ ಬಲಗಡೆಯಿಂದ ವಿಜಯ್ ಎಂಬುವರು KA-19-EG-9148 ನಂಬ್ರದ ಮೋಟಾರ್ ಸೈಕಲಿನಲ್ಲಿ ಎಂ ಎಸ್ ಮಂಜುನಾಥ ರವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಬಂದು ಬಲಬದಿಯ ಡಿವೈಡರ್ ಬಳಿ ನಿಂತಿದ್ದು MOHAMMED MANSOOR ಎಂಬಾತನು KA-21-C-1191 ನಂಬ್ರದ AYRA ಎಂಬ ಹೆಸರಿನ ಬಸ್ಸನ್ನು ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಆಟೋ ರಿಕ್ಷಾದ ಬಲಬದಿಗೆ ಒಮ್ಮೆಲೇ ನುಗ್ಗಿಸಿದ ಪರಿಣಾಮ ಬಸ್ಸು ಪಿರ್ಯಾದಿದಾರರ ಆಟೋ ರಿಕ್ಷಾದ ಬಲಬದಿಗೆ ಮತ್ತು ಡಿವೈಡರ್ ಬಳಿ ನಿಂತಿದ್ದ ಮೋಟಾರ್ ಸೈಕಲಿಗೆ ಡಿಕ್ಕಿ ಪಡಿಸಿದ್ದು, ಇದರ ಪರಿಣಾಮ ಮೋಟಾರ್ ಸೈಕಲ್ ಸವಾರ ಮತ್ತು ಸಹ ಸವಾರ ರಾಹೆ 66ನೇ ಡಾಮಾರು ರಸ್ತೆಗೆ ಬಿದ್ದಿದ್ದು ಈ ಅಪಘಾತದಿಂದ ಮೋಟಾರ್ ಸೈಕಲಿನ ಸಹ ಸವಾರನಾದ ಎಂ ಎಸ್ ಮಂಜುನಾಥನಿಗೆ  ಬಲಕಾಲಿನ ಪಾದಕ್ಕೆ ಗಂಬೀರ ಸ್ವರೂಪದ ಗಾಯವಾಗಿರುತ್ತದೆ ಮತ್ತು  ಬೈಕ್ ಸವಾರನಾದ ವಿಜಯ್ ಎಂಬಾತನಿಗೆ ಬಲ ಕಾಲಿನ ಮೊಣಗಂಟಿಗೆ ತರಚಿದ ರೀತಿಯ ಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಎಜೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 10-08-2022 06:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080