ಅಭಿಪ್ರಾಯ / ಸಲಹೆಗಳು

Crime Reported in : Moodabidre PS

ದಿನಾಂಕ:04.01.2023 ರಂದು ಪಿರ್ಯಾದಿ  ಆರ್ ಶ್ರೀನಿವಾಸ ರವರು ತನ್ನ ಬಾಬ್ತು ಕೆಎ-20-ಇಬಿ-0958 ನೇ ಮೋಟಾರು ಸೈಕಲ್ ನಲ್ಲಿ ಹೆಂಡತಿ ಸೀತಾ ರವರನ್ನು ಕುಳ್ಳಿರಿಸಿಕೊಂಡು ಮೂಡಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಶಿವಗಿರಿ ಕಾಂಪ್ಲೇಕ್ಸ್ ನ ಸಮೀಪ ತಲುಪುತ್ತಿದ್ದಂತೆ ಸಮಯ ಸುಮಾರು ಮಧ್ಯಾಹ್ನ 3.00 ಗಂಟೆಗೆ ಹಿಂದಿನಿಂದ ಎಮ್ಎಚ್-04-ಕೆಡಿ-3122 ಕಾರಿನ ಚಾಲಕ ಅರವಿಂದ ಯಾದವ ಎಂಬಾತನು ಕಾರನ್ನು ಅತೀವೇಗವಾಗಿ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಮೋಟಾರ್ ಸೈಕಲ್ ನ್ನು ಹಾಗೂ ಅವರ ಎದುರುಗಡೆಯಿಂದ ಹೋಗುತ್ತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಬರದಲ್ಲಿ ಮುಂದಕ್ಕೆ ಬಂದಾಗ ಎದುರುಗಡೆಯಿಂದ ವಾಹನ ಬರುವುದನ್ನು ಕಂಡು ಆತನು ಒಮ್ಮೇಲೆ ಕಾರನ್ನು ಎಡಕ್ಕೆ ಚಲಾಯಿಸಿದ ಪರಿಣಾಮ ಕಾರು ಪಿರ್ಯಾದಿದಾರರ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸಮೇತ ಪಿರ್ಯಾದಿದಾರರು ಮತ್ತು ಅವರ ಹೆಂಡತಿ ಸೀತಾರವರು ರಸ್ತೆಯ ಮೇಲೆ ಬಿದ್ದಿದ್ದು, ಪಿರ್ಯಾದಿದಾರರ  ಹಾಗೂ ಪಿರ್ಯಾದಿದಾರರ ಹೆಂಡತಿಗೆ ತೀವ್ರ ತರದ ಗಾಯವಾಗಿದ್ದು ಚಿಕಿತ್ಸೆಗಾಗಿ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಪಿರ್ಯಾದಿದಾರರ ಹೆಂಡತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ. ಅಪಘಾತ ಪಡಿಸಿದ ಕಾರಿನ ಚಾಲಕನು ತಾನು ಆಸ್ಪತ್ರೆಗೆ ಬರುವುದಾಗಿ ತಿಳಿಸಿ ಪಿರ್ಯಾದಿದಾರರನ್ನು ಆಟೋ ರಿಕ್ಷಾದಲ್ಲಿ ಕಳುಹಿಸಿ ನಂತರ ಬಾರದೇ ಸ್ಥಳದಿಂದ ಕಾರನ್ನು ತೆಗೆದುಕೊಂಡು ಹೋಗಿರುತ್ತಾನೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 06-01-2023 07:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080