ಅಭಿಪ್ರಾಯ / ಸಲಹೆಗಳು

Crime Reported in : Traffic South Police Station                                                        

ದಿನಾಂಕ; 06-01-2023 ರಂದು ಪಿರ್ಯಾದಿ ಅನಿಲ್ ಕುಮಾರ್ ಯೇನಪೋಯಾ ಆಸ್ಪತ್ರೆಯ ಮುಂಭಾಗದಲ್ಲಿ ಸಂಜೆ  ಸುಮಾರು 5-50 ಗಂಟೆಗೆ ನಿಂತುಕೊಂಡಿದ್ದು ಅದೇ ಸಮಯಕ್ಕೆ ದೇರಳಕಟ್ಟೆ ಕಡೆಯಿಂದ ತೊಕ್ಕೊಟು ಕಡೆಗೆ ಬರುತ್ತಿದ್ದ  ಆ್ಯಂಬುಲೆನ್ಸ್ ನಂಬ್ರ GA-07-F-5951  ನೇದನ್ನು ಅದರ ಚಾಲಕ ದತ್ತತ್ರಾಯ ನಾರಾಯಣ ಮೇಸ್ತ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಆ್ಯಂಬುಲೇನ್ಸ್ ವಾಹನವನ್ನು ಚಲಾಯಿಸಿಕೊಂಡು  ಬಂದು ರಸ್ತೆ ಬದಿಯಲ್ಲಿ ಇದ್ದ ಸಿಮೆಂಟ್ ಕಟ್ಟೆಗೆ  ಡಿಕ್ಕಿಪಡಿಸಿದ ಪರಿಣಾಮ  ಆ್ಯಂಬುಲೆನ್ಸ್ ಚಾಲಕ ದತ್ತತ್ರಾಯ ನಾರಾಯಣ ಮೇಸ್ತ  ರವರಿಗೆ ಮೇಲ್ಮೋಟಕ್ಕೆ ಯಾವುದೇ ಗಾಯವಿಲ್ಲದಿದ್ದಂತೆ ಕಂಡರೂ ಪ್ರಜ್ಞೆ ಹೀನಾ ಸ್ಥಿತಿಯಲ್ಲಿ ಇರುವುದನ್ನು ಕಂಡು  ಕೂಡಲೇ ಪಿರ್ಯಾದಿದಾರರು ಮತ್ತು ಅಲ್ಲಿ ಸೇರಿದ ಸಾರ್ವಜನಿಕರು ಚಿಕಿತ್ಸೆ ಬಗ್ಗೆ ಬೆರೊಂದು ವಾಹನದಲ್ಲಿ ದೇರಳಕಟ್ಟೆಯ ಯೇನಪೋಯಾ ಆಸ್ಪತ್ರೆಗೆ ದಾಖಲಿಸಿರುತ್ತಾರೆ ಎಂಬಿತ್ಯಾದಿ.

 

2) ಪಿರ್ಯಾದಿ ಹೇಮಲತಾ ಬಿ  ದಿನಾಂಕ: 07-01-2023 ರಂದು ಸ್ಕೂಟರ್ ನಂಬ್ರ: KA-19-EC-2423 ನೇದನ್ನು ಸವಾರಿ ಮಾಡಿಕೊಂಡು ಮಂಗಳೂರಿನಿಂದ ಅವರ ಮನೆಯಾದ ಸೋಮೇಶ್ವರ ಕಡೆಗೆ ರಾ.ಹೆ -66 ರಲ್ಲಿ ಸ್ಕೂಟರ್ ನ್ನು ಸವಾರಿ ಮಾಡಿಕೊಂಡು ಬರುತ್ತಿರುವಾಗ ಸಮಯ ಸುಮಾರು ಬೆಳಿಗ್ಗೆ 9-45 ಗಂಟೆಗೆ ಕಲ್ಲಾಪು ಬಳಿ ತಲುಪಿದಾಗ ಅದೇ ರಸ್ತೆಯಲ್ಲಿ ಪಿರ್ಯಾದಿದಾರರ ಹಿಂದಿನಿಂದ ಬರುತ್ತಿದ್ದ ಕಾರು ನಂಬ್ರ:KA-20-N-6502 ನೇದನ್ನು ಅದರ ಚಾಲಕ ರವಿರಾಜ್ ಇಡ ಎಂಬಾತನು ಯಾವುದೇ ಸೂಚನೆ ನೀಡದೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಓಮ್ಮೇಲೆ ಎಡಕ್ಕೆ ಚಲಾಯಿಸಿದಾಗ ಅದೇ ರಸ್ತೆಯಲ್ಲಿ ಪಿರ್ಯಾದಿದಾರರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ನಂಬ್ರ:KA-19-EH-0028 ನೇದಕ್ಕೆ ಡಿಕ್ಕಿ ಪಡಿಸಿ ನಂತರ ಸದ್ರಿ ಸ್ಕೂಟರ್ ಪಿರ್ಯಾದಿದಾರರು ಸವಾರಿ ಮಾಡುತ್ತಿದ್ದ ಸ್ಕೂಟರ್ ನ ಬಲಬದಿಗೆ ಡಿಕ್ಕಿ ಪಡಿಸಿದ ಪರಿಣಾಮ ಪಿರ್ಯಾದಿದಾರರು ಹಾಗೂ ಸ್ಕೂಟರ್ ಸವಾರ ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ಪಿರ್ಯಾದಿದಾರರಿಗೆ  ಎರಡು ಕಾಲಿನ ಮೊಣಕಾಲಿಗೆ ರಕ್ತಗಾಯ,ಬಲಕಾಲಿನ ಪಾದಕ್ಕೆ ರಕ್ತ ಗಾಯ,ಮುಖದ ಬಲ ಬದಿಗೆ ರಕ್ತ ಗಾಯ,ಬಲಬದಿ ಭುಜಕ್ಕೆ ರಕ್ತ ಗಾಯ,ಹಾಗೂ ಎರಡು ಕೈಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಲ್ಲಿ ಸೇರಿದ ಜನರು ಪಿರ್ಯಾದಿದಾರರನ್ನು ಡಿಕ್ಕಿ ಪಡಿಸಿದ ಕಾರಿನಲ್ಲಿ ಚಿಕಿತ್ಸೆ ಬಗ್ಗೆ ಸಹಾರ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದು ಪಿರ್ಯಾದಿದಾರರು ಹೊರ ರೋಗಿಯಾಗಿ ಚಿಕಿತ್ಸೆ   ಪಡೆದುಕೊಂಡಿದ್ದು  ಅಪಘಾತ ಸಮಯ ಅವರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಸವಾರ ವಿನಾಯಕ ರವರು ಯಾವುದೇ ಚಿಕಿತ್ಸೆ ಪಡೆದುಕೊಂಡಿರುವುದಿಲ್ಲ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 07-01-2023 06:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080