ಅಭಿಪ್ರಾಯ / ಸಲಹೆಗಳು

Crime Reported in :Traffic South Police Station             

ದಿನಾಂಕ:23-10-2022 ರಂದು ಪಿರ್ಯಾಧಿ ANANDA BELCHADA ದಾರರು ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನ ಬಳಿ ದೇರಳಕಟ್ಟೆ ಕಡೆಯಿಂದ ಕುತ್ತಾರ್ ಕಡೆಗೆ ಹೋಗುವ ರಸ್ತೆಯನ್ನು ದಾಟುತ್ತಿರುವಾಗ ಸಮಯ ಸುಮಾರು ಬೆಳಗ್ಗೆ 10:15 ಗಂಟೆಗೆ ದೇರಳಕಟ್ಟೆ ಕಡೆಯಿಂದ ಬರುತ್ತಿದ್ದ KA-19-EY-1534 ನೇದರ ಸ್ಕೂಟರನ್ನು ಅದರ ಸವಾರ ನಿಶಾನ್ ರವರು ಸಹ ಸವಾರ ಕೃಷ್ಣಪ್ರಸಾದ್ ಕೆ. ರವರನ್ನು ಕುಳ್ಳರಿಸಿಕೊಂಡು ದುಡುಕುತನ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿಕೊಂಡು ಬಂದು ಪಿರ್ಯಾಧಿದಾರರಿಗೆ ಡಿಕ್ಕಿ ಹೊಡೆದ ಪರಿಣಾಮ  ಪಿರ್ಯಾಧಿದಾರರು ಡಾಮಾರು ರಸ್ತೆಗೆ ಬಿದ್ದು ಎಡಗಾಲಿನ ಮಣಿಗಂಟಿಗೆ ಮೂಳೆ ಮುರಿತದ ಗಾಯವಾಗಿದ್ದು ಕೂಡಲೇ ಅಲ್ಲಿ ಸೇರಿದ್ದ ಸಾರ್ವಜನಿಕರು ಚಿಕಿತ್ಸೆ ಬಗ್ಗೆ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ಪರೀಕ್ಷಿಸಿದ ವೈಧ್ಯರು ಒಳರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ, ಎಂಬಿತ್ಯಾದಿ.

Crime Reported in :Surathkal PS      

ದಿನಾಂಕ 24-10-2022 ರಂದು ರಾತ್ರಿ 7:30 ಗಂಟೆಗೆ ಪಿರ್ಯಾದಿ Shareek Abdul Rafeeq ದಾರರು ತನ್ನ ಬಾಬ್ತು KA-19-HC-1977 ನಂಬ್ರದ ಸುಜುಕಿ ಕಂಪೆನಿಯ ಅಕ್ಸಸ್ ಸ್ಕೂಟರ್ ಅನ್ನು ಸುರತ್ಕಲ್ ಮಹಾರಾಜ ಹೋಟೇಲ್ ನ ಎದುರುಗಡೆ ನಿಲ್ಲಿಸಿ ಹ್ಯಾಂಡ್ ಲಾಕ್ ಮಾಡಿ ಪಕ್ಕದ ಅಂಗಡಿಗೆ ಹೋಗಿದ್ದು ವಾಪಸ್ಸು ರಾತ್ರಿ ಸುಮಾರು 8:00 ಗಂಟೆಗೆ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ ಸ್ಥಳದಲ್ಲಿ ಇರುವುದಿಲ್ಲ ಪಿರ್ಯಾದಿದಾರರು ಎಲ್ಲಾ ಕಡೆ ಹುಡುಕಾಟ ಮಾಡಿದರು ಎಲ್ಲಿಯೂ ಸಿಕ್ಕಿರುವುದಿಲ್ಲ ಇದರ ಅಂದಾಜು ಮೌಲ್ಯ 50000/- ರೂಪಾಯಿ ಆಗಿದ್ದು ಯಾರೋ ಕಳ್ಳರು ಸದ್ರಿ ಸ್ಕೂಟರ್ ಅನ್ನು ಕಳವು ಮಾಡಿಕೊಂಡು ಹೋಗಿರುವುದು ಎಂಬಿತ್ಯಾದಿ.

 

 

ಇತ್ತೀಚಿನ ನವೀಕರಣ​ : 26-10-2022 08:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080